ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡುವ ಅದೇಶವನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.15ಕ್ಕೆ ಮುಂದೂಡಿದೆ.
ಪೋಕ್ರೋ ಪ್ರಕರಣಕ್ಕೆ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ಆದೇಶದ ಪ್ರತಿಯನ್ನು ಶರಣರ ಪರ ವಕೀಲರು ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಹೈಕೋರ್ಟ್ ವಿಧಿಸಿದ ಷರತ್ತುಗಳ ಅನ್ವಯ ಭದ್ರತಾ ಖಾತರಿ ಪರಿಶೀಲಿಸಿ ಬಿಡುಗಡೆ ಆದೇಶ ಪ್ರಕಟಿಸಲು ನ್ಯಾಯಾಲಯ ಬುಧವಾರಕ್ಕೆ ಸಮಯ ನಿಗದಿಪಡಿಸಿತು.
ಎರಡನೇ ಪೋಸ್ಕೊ ಪ್ರಕರಣದಲ್ಲಿ ಬಾಡಿ ವಾರೆಂಟ್ ಮೇಲೆ ಶರಣರನ್ನು ವಿಚಾರಣೆ ನಡೆಸಿದ್ದ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಕೋರಿಕೆ ಸಲ್ಲಿಸಿದರು. ಸರ್ಕಾರಿ ಪರ ವಕೀಲ ಜಗದೀಶ್ ಅವರು ಅರ್ಜಿಯೊಂದನ್ನು ನ್ಯಾಯಾಲಯದ ಮುಂದಿಟ್ಟರು. ಇದನ್ನು ನ.15ರಂದು ಪರಿಶೀಲನೆ ಮಾಡುವುದಾಗಿ ನ್ಯಾಯಾಧೀಶ ಬಿ.ಕೆ.ಕೋಮಲಾ ಪ್ರಕಟಿಸಿದರು.