ಚಿತ್ರದುರ್ಗ: “ನಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಮಹಾರಾಷ್ಟ್ರದ ನಾಗುರದಲ್ಲಿರುವ ಆರ್ಎಸ್ಎಸ್ ಹೆಡಗೇವಾರ್ ವಸ್ತುಸಂಗ್ರಹಾಲಯದ ನನ್ನ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬಲ್ಲಿರಾ?” ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನ ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್ ಪ್ರಶ್ನಿಸಿದ್ದಾರೆ. ಅಲ್ಲದೇ ಆರ್ಎಸ್ಎಸ್ ವಸ್ತುಸಂಗ್ರಹಾಲಯದ ಪ್ರವೇಶ ನಿರಾಕರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗೂಳಿಹಟ್ಟಿ ಡಿ.ಶೇಖರ್ ಅಸಮಾಧಾನ ಹೊರಹಾಕಿದ್ದಾರೆ.
ನಾಗಪುರದ ಅರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಉಂಟಾದ ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಗೂಳಿಹಟ್ಟಿ ಡಿ.ಶೇಖರ್ ಹಂಚಿಕೊಂಡಿದ್ದಾರೆ.
ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ನಾನು ಖುಷಿಯಿಂದ ಅಲ್ಲಿಗೆ ತೆರಳಿದ್ದೆ. ಆದರೆ, ಹೆಡಗೇವಾರ್ ವಸ್ತುಸಂಗ್ರಹಾಲಯ ಪ್ರವೇಶದ ಸಂದರ್ಭದಲ್ಲಿ ಕಹಿ ಅನುಭವ ಉಂಟಾಯಿತು ಎಂದು ಬೇಸರ ಹೊರಹಾಕಿದ್ದಾರೆ.