ಚಿತ್ರದುರ್ಗ: ನನಗೆ ಟಿಕೆಟ್ ತಪ್ಪಲು ಲಿಂಗಮೂರ್ತಿ, ಯಡಿಯೂರಪ್ಪ, ವಿಜಯೇಂದ್ರ ನೇರ ಕಾರಣ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಾರನ ಕಣಿವೆ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಈ ಬಾರಿ ಟಿಕೆಟ್ ತಪ್ಪಲು ಯಡಿಯೂರಪ್ಪ, ಅವರ ಮಗನೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಸಿಎಂ ಆಗಲು ನಾನೇ ಕಾರಣ ಎಂದು ಎದೆ ತಟ್ಟಿ ಹೇಳುತ್ತೇನೆ. ಯಡಿಯೂರಪ್ಪ ಅವರು ಆಪ್ತರಿಗೆ ಒಳ್ಳೆಯ ನಿಗಮ ಕೊಟ್ಟರು ನಮಗೆಲ್ಲ ಭೋವಿ, ವಾಲ್ಮೀಕಿಯಂತಹ ಸಣ್ಣ ನಿಗಮ ಕೊಟ್ಟರು ಎಂದರು. ಟಿಕೆಟ್ ಹಂಚಿಕೆಯಲ್ಲಿಯೂ ಬಿಎಸ್ ವೈ ಅವರ ಮೇಲುಗೈ ಆಗಿದೆ. ಜನಾರ್ದನ ರೆಡ್ಡಿ ಪಕ್ಷದಲ್ಲಿ ಟಿಕೇಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಇಲ್ಲವಾದಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದರು. ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಈ ವೇಳೆ ಸ್ಪಷ್ಟಪಡಿಸಿದರು.