ಚಿತ್ರದುರ್ಗ: ನನಗೆ ಟಿಕೆಟ್ ತಪ್ಪಲು ಲಿಂಗಮೂರ್ತಿ, ಯಡಿಯೂರಪ್ಪ, ವಿಜಯೇಂದ್ರ ನೇರ ಕಾರಣ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಾರನ ಕಣಿವೆ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಬೆಂಬಲಿಗರ ಸಭೆ ನಡೆಸಿದ್ದಾರೆ. ಈ ಬಾರಿ ಟಿಕೆಟ್ ತಪ್ಪಲು ಯಡಿಯೂರಪ್ಪ, ಅವರ ಮಗನೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ಸಿಎಂ ಆಗಲು ನಾನೇ ಕಾರಣ ಎಂದು ಎದೆ ತಟ್ಟಿ ಹೇಳುತ್ತೇನೆ. ಯಡಿಯೂರಪ್ಪ ಅವರು ಆಪ್ತರಿಗೆ ಒಳ್ಳೆಯ ನಿಗಮ ಕೊಟ್ಟರು ನಮಗೆಲ್ಲ ಭೋವಿ, ವಾಲ್ಮೀಕಿಯಂತಹ ಸಣ್ಣ ನಿಗಮ ಕೊಟ್ಟರು ಎಂದರು. ಟಿಕೆಟ್ ಹಂಚಿಕೆಯಲ್ಲಿಯೂ ಬಿಎಸ್ ವೈ ಅವರ ಮೇಲುಗೈ ಆಗಿದೆ. ಜನಾರ್ದನ ರೆಡ್ಡಿ ಪಕ್ಷದಲ್ಲಿ ಟಿಕೇಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಇಲ್ಲವಾದಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದರು. ಬಿಜೆಪಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಈ ವೇಳೆ ಸ್ಪಷ್ಟಪಡಿಸಿದರು.
ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…
ಹೆಚ್ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…
ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…
ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…
ಬೀದರ್ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…