ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪ ಇಲ್ಲದ್ದನ್ನ ನಾನು ನೋಡಲು ಕೂಡಾ ಸಾಧ್ಯವಿಲ್ಲ ಎನ್ನುತ್ತ ಕಣ್ಣೀರಿಟ್ಟ ಹೊನ್ನಾಳಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ.
ಶುಕ್ರವಾರ ಸಂಜೆ ನಗರದ ಹೊರವಲಯದ ಶ್ರೀ ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದರು.ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಕೇಳಿದರೆ ಮೈ ರೋಮಾಂಚನ ಆಗುತ್ತದೆ. ಎಲ್ಲೋ ಇದ್ದ ನನ್ನ ಬೆನ್ನು ತಟ್ಟಿ ರಾಜಕೀಯಕ್ಕೆ ತಂದವರು, ರಾಜ್ಯದಲ್ಲಿ ನನ್ನಂತೆ ಅನೇಕರನ್ನು ಯಡಿಯೂರಪ್ಪ ಬೆಳೆಸಿದ್ದಾರೆ ಎಂದರು.