ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಲಾರಿ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿದ ಘಟನೆ ಹಿರಿಯೂರು-ಚೆಳ್ಳಕೆರೆ ರಸ್ತೆಯ ಗೊಲ್ಲಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ನಾಲ್ವರ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.
ಬಸ್ ಚಳ್ಳಕೆರೆಯಿಂದ ಹಿರಿಯೂರಿಗೆ ಹೊರಟಿತ್ತು. ಈ ವೇಳೆ ಲಾರಿಗೆ ಹಿಂಬದಿಯಿಂದ ಬಸ್ ಗುದ್ದಿ ಅವಘಡ ಸಂಭವಿಸಿದೆ. ಇಬ್ಬರು ಪುರುಷರು, ಓರ್ವ ಮಹಿಳೆ, ಒಂದು ಮಗು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಇನ್ನು ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45) , ಮರಾಯಚೂರಿನ ಮಸ್ಕಿ ಮೂಲದ ರಮೇಶ್(40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಚಾಲಕ ಲಾರಿಯೊಂದಿಗೆ ಪರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಐಮಂಗಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.