News Karnataka Kannada
Tuesday, May 07 2024
ಚಿತ್ರದುರ್ಗ

ಇಂದು ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಜಾಮೀನು ಭವಿಷ್ಯ ನಿರ್ಧಾರ

Karnataka HC stays trial in Murugashree cases
Photo Credit : News Kannada

ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮುರುಘಾ ಶ್ರೀಗಳಿಗೆ ಇನ್ನು ಜಾಮೀನು ಸಿಕ್ಕಿಲ್ಲ. ಇಂದು ಚಿತ್ರದುರ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶಿವಮೂರ್ತಿ ಶರಣರ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ.

ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೋ ಪ್ರಕರಣದಲ್ಲಿ ಇಂದು ಜಾಮೀನು ಮಂಜೂರಾಗುವ ಸಾಧ್ಯತೆ ಇದೆ. ಮೊದಲ ಪೋಕ್ಸೋ ಪ್ರಕರಣದ ಜಾಮೀನು ಸಂಬಂಧ ಸ್ವಾಮೀಜಿಗೆ ಕೆ.ಸಿ ನಾಗರಾಜ್, ಮಧುಸೂಧನ್ ಎಂಬುವವರಿಂದ ಶೂರಿಟಿ ನೀಡಲಾಗಿದೆ. ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಶೂರಿಟಿ ವೆರಿಫಿಕೇಷನ್ ಮಾಡಿದ ಬಳಿಕ ಜಾಮೀನು ಮಂಜೂರು ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಎರಡನೇ ಪೋಕ್ಸೋ ಕೇಸ್‌ನ ತನಿಖೆಗೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇದೆ. ಈ ಸ್ಟೇ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯರ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರಿಗೆ ಮೊದಲ ಪೋಕ್ಸೋ ಕೇಸ್‌ನಲ್ಲಿ ಜಾಮೀನು ಸಿಕ್ಕರೆ ಬಿಡುಗಡೆಯಾಗಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು