ಚಿತ್ರದುರ್ಗ: ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮುರುಘಾ ಶ್ರೀಗಳಿಗೆ ಇನ್ನು ಜಾಮೀನು ಸಿಕ್ಕಿಲ್ಲ. ಇಂದು ಚಿತ್ರದುರ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶಿವಮೂರ್ತಿ ಶರಣರ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ.
ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೋ ಪ್ರಕರಣದಲ್ಲಿ ಇಂದು ಜಾಮೀನು ಮಂಜೂರಾಗುವ ಸಾಧ್ಯತೆ ಇದೆ. ಮೊದಲ ಪೋಕ್ಸೋ ಪ್ರಕರಣದ ಜಾಮೀನು ಸಂಬಂಧ ಸ್ವಾಮೀಜಿಗೆ ಕೆ.ಸಿ ನಾಗರಾಜ್, ಮಧುಸೂಧನ್ ಎಂಬುವವರಿಂದ ಶೂರಿಟಿ ನೀಡಲಾಗಿದೆ. ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಶೂರಿಟಿ ವೆರಿಫಿಕೇಷನ್ ಮಾಡಿದ ಬಳಿಕ ಜಾಮೀನು ಮಂಜೂರು ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಎರಡನೇ ಪೋಕ್ಸೋ ಕೇಸ್ನ ತನಿಖೆಗೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಇದೆ. ಈ ಸ್ಟೇ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯರ ಪರ ವಕೀಲರಿಂದ ಆಕ್ಷೇಪಣೆ ಸಲ್ಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರಿಗೆ ಮೊದಲ ಪೋಕ್ಸೋ ಕೇಸ್ನಲ್ಲಿ ಜಾಮೀನು ಸಿಕ್ಕರೆ ಬಿಡುಗಡೆಯಾಗಬಹುದು.