ಬೆಂಗಳೂರು: ಬಿಸಿಲಿನ ಧಗೆಯಿಂದ ಬೇಸತ್ತಿರುವ ಜನಕ್ಕೆ ಇದೀಗ ಇನ್ನೊಂದು ಕಂಟಕ ಎದುರಾಗಿದೆ. ಬಸಿಲಿಸ ತಾಪಕ್ಕೆ ಏರಿಕೆ ಬೆನ್ನಲ್ಲೇ ಕಾಲರಾ ಕೂಡ ತನ್ನ ಆಟವನ್ನು ಶುರುಮಾಡಿಕೊಂಡಿದೆ. ಈಗಾಗಲೇ ಬೇಸತ್ತಿರುವ ಜನರು ಕಾಲರಾದ ವಿರುದ್ಧ ಹೋರಾಡುವ ಸ್ಥಿತಿ ಎದುರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ಆತಂಕವನ್ನು ಸೃಷ್ಟಿಸಿದೆ. ಬೊಮ್ಮನಹಳ್ಳಿಯಲ್ಲಿ 3ನೇ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಕಾಲರಾ ಕೇಸ್ಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ
ನಗರ ಒಂದರಲ್ಲೇ ಬರೋಬ್ಬರಿ 9 ಕೇಸ್ಗಳ ದೃಡಪಟ್ಟಿವೆ. ಇತ್ತ ರಾಮನಗರದ ಓರ್ವ ವ್ಯಕ್ತಿಗೆ ಕಾಲರಾ ಚಿಕಿತ್ಸೆ ಕೊಡಿಲಾಗುತ್ತಿದೆ.ಇನ್ನು ನಿನ್ನೆಯಷ್ಟೇ (ಏ.06) ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಡಪಟ್ಟಿತ್ತು. ಎಚ್ಚೆತ್ತುಕೊಂಡಿರುವ ಅಧಿಕಾರಿಗಳು BCM ಹಾಸ್ಟೆಲ್ನ ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಕಳಿಸಿದ್ದಾರೆ.ಆದರೆ ರೋಗದ ಭಯಕ್ಕೆ ವಿದ್ಯಾರ್ಥಿಗಳು ಹಾಸ್ಟಲ್ ತೊರೆಯುತ್ತಿದ್ದಾರೆ.
ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಗೆ ಪತ್ರ ಬರೆದಿದೆ. 30 ಸಾವಿರ ಬೀದಿಬದಿ ಹೋಟೆಲ್ಗಳಿದ್ದು, ಇವುಗಳಿಂದ ಜನರ ಆರೋಗ್ಯ ಹದಗೆಡುತ್ತಿದೆ ಎಂದು ಆರೋಪಿಸಿದೆ.ಹೀಗಾಗಿ ಬೀದಿ ಬದಿಯ ಹೋಟೆಲ್ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿದೆ.