ಬೆಂಗಳೂರು: ಕಾವೇರಿ ನೀರಿನಿಂದ ಕಾರನ್ನು ಸ್ವಚ್ಛಗೊಳಿಸಿದ ಮೂವರು ಕಾರು ಮಾಲಕರಿಗೆ ಬೆಂಗಳೂರು ಜಲಮಂಡಳಿ 5 ಸಾವಿರ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.
ಸದಾಶಿವನಗರದಲ್ಲಿ ಕಾರನ್ನು ಸ್ವಚ್ಛಗೊಳಿಸಿದ ಮಹಿಳೆಗೆ ಸ್ಥಳದಲ್ಲೇ 5 ಸಾವಿರ ದಂಡ ವಿಧಿಸಿದೆ. ಮಹಾದೇವಪುರ ಮತ್ತು ಡಾಲರ್ಸ್ ಕಾಲೋನಿಯಲ್ಲಿ ಇಬ್ಬರಿಗೆ ದಂಡ ವಿಧಿಸಲಾಗಿದೆ. ಕಾರ್ ವಾಶ್, ಹೂ ತೋಟಕ್ಕೆ ಕಾವೇರಿ ನೀರು ಬಳಸದಂತೆ ಈಗಾಗಲೇ ಜಲಮಂಡಳಿ ಈಗಾಗಲೇ ಸೂಚನೆ ನೀಡಿದ್ದು, ಸೂಚನೆ ಮೀರಿ ಕಾರನ್ನು ಸ್ವಚ್ಛ ಮಾಡಿದ್ದಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.
ವಾಹನ ತೊಳೆಯಲು, ತೋಟಗಾರಿಕೆ, ಫ್ಲಶ್ ಮಾಡಲು, ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲು ಹಾಗೂ ಇತ್ಯಾದಿ ಬಳಕೆಗೆ ಕುಡಿಯುವ ನೀರನ್ನು ಬಳಸದಂತೆ ಸಾರ್ವಜನಿಕ ಹಿತಾಸಕ್ತಿಯಿಂದ ಜಲಮಂಡಳಿ ಪ್ರಕಟಣೆಯ ಮೂಲಕ ನಿಷೇಧ ಈಗಾಗಲೇ ಆದೇಶವನ್ನು ಜಾರಿ ಮಾಡಿದೆ.