News Karnataka Kannada
Monday, May 06 2024
ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನ: ಹರಿದು ಬಂದ ಜನಸಾಗರ

CM Janata Darshan
Photo Credit : News Kannada

ಬೆಂಗಳೂರು: ಇಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಪ್ರದೇಶದ ಜನರು ಸಾಗರದಂತೆ ಆಗಮಿಸಿದ್ದು ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಲಾಗಿದೆ‌.

ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್‌ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ನೀಡಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್​ ಕಾರ್ಡ್​ ಅಥವಾ ಪಡಿತರ ಚೀಟಿ ತರಬೇಕಿದೆ.

ಮತ್ತಷ್ಟು ಸುದ್ದಿಗಳಿಗಾಗಿ: ನವೆಂಬರ್ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು