ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವರ 14ನೇ ಬಜೆಟ್ ಆಗಿದ್ದು ರೈತ ವಿರೋಧಿ ಕಾಯಿದೆ ಎಪಿಎಂಸಿ ಕಾಯಿದೆ ವಾಪಸ್ಸು ಪಡೆಯುವುದಾಗಿ ಘೋಷಿಸಿದ್ದಾರೆ.
ಸಿಎಂ ಘೋಷಣೆ ಮಾಡ್ತಿದ್ದಂತೆ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಎಪಿಎಂಸಿ ಕಾಯ್ದೆ ಹಿಂಪಡೆಯಿರಿ ಎಂದು ಹಲವು ಹೋರಾಟಗಳು ನಡೆದಿದ್ದವು. ಸದ್ಯ ರೈತರ ಆಸೆ ಈಡೇರಿದೆ. ರೈತರ ಹಿತದೃಷ್ಟಿಯಿಂದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲಾಗುತ್ತೆ. APMC ತಿದ್ದುಪಡಿ ಕಾಯ್ದೆ ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಘೋಷಿಸಿದ್ದಾರೆ.