News Karnataka Kannada
Monday, April 29 2024
ಬೆಂಗಳೂರು

ಸಾರ್ವಜನಿಕ ಕುಂದುಕೊರತೆ ಆಲಿಸಲು ಟ್ವಿಟರ್‌ ಖಾತೆ ತೆರೆದ ಸಿಎಂ ಸಿದ್ದು

Will retire from politics if he proves he received money for transfer: CM
Photo Credit : Facebook

ಬೆಂಗಳೂರು: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು