Bengaluru 28°C
Ad

ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Cm (3)

ಬೆಂಗಳೂರು: ಇಂದು ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್​ ಅಹ್ಮದ್ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು.

ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್​ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಮಾಮ್ ಹಾಗೂ ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಸನ್ಮಾನಿಸಿದರು.

Ad
Ad
Nk Channel Final 21 09 2023
Ad