News Karnataka Kannada
Sunday, April 28 2024
ಬೆಂಗಳೂರು

ಷರತ್ತಿನ ಅನುದಾನ ಒದಗಿಸಿದ ಸಿಎಂ ಸಿದ್ದರಾಮಯ್ಯ

Good news for sportspersons: CM promises big promises
Photo Credit : News Kannada

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು. ಹಲವು ಬಾರಿ ಮನವಿ ಮಾಡಿದ್ದರೂ ಸಿಎಂ ಕ್ಷೇತ್ರಾಭಿವೃದ್ಧಿಗೆ  ಹಣ ನೀಡುತ್ತಿಲ್ಲ ಎಂದು ಹಲವು ಶಾಸಕರು ಅಸಮಾಧಾನಗೊಂಡಿದ್ದರು.

ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ 31 ಜಿಲ್ಲೆಗಳ 135 ಶಾಸಕರ ಸಭೆ ಕರೆದಿದ್ದರು. ಸಭೆಯಲ್ಲಿ ಶಾಸಕರಿಗೆ ಕೆಲವು ಷರತ್ತು ವಿಧಿಸುವ ಮೂಲಕ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ್ದಾರೆ. ಶಾಸಕರ ಈ ಅಳಲು ಕೇಳಿದ ಸಿಎಂ ಸಿದ್ದರಾಮಯ್ಯ, ಆದ್ಯತೆ ಮತ್ತು ಅನುದಾನದ ಲಭ್ಯತೆ ಆಧಾರದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಅಹವಾಲುಗಳನ್ನು ಜಾರಿಗೆ ತರುವಂತೆ ಶಾಸಕರಿಗೆ ಷರತ್ತು ವಿಧಿಸಿದ್ದಾರೆ. ಇದಕ್ಕೆ ಶಾಸಕರು ಸಮ್ಮತಿ ಸೂಚಿಸಿದ ಬಳಿಕ ಅನುದಾನ ಬಿಡುಗಡೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಮೊದಲ ಕಂತಿನಲ್ಲಿ 145 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರತಿ ಕ್ಷೇತ್ರಕ್ಕೆ 50 ಲಕ್ಷ ರೂ. ನಂತೆ 224 ಕ್ಷೇತ್ರದ ಶಾಸಕರು, 67 ವಿಧಾನಪರಿಷತ್ ಸದಸ್ಯರಿಗೆ ಅನುದಾನ ನೀಡಲಾಗಿದೆ. ಈ ಮೂಲಕ ಸರ್ಕಾರ ಶಾಸಕರ ಸಮಸ್ಯೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಇನ್ನು ಮೊದಲ ಕಂತು ಬಿಡುಗಡೆಯಾದ ಬಳಿಕವಾದರೂ ಶಾಸಕರ ಅಸಮಾಧಾನ ನಿವಾರಣೆಯಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು