ಬೆಂಗಳೂರು: ತಮಿಳು ನಾಡು ಸಚಿವ ಉದಯನಿಧಿ ಸ್ಟಾಲಿನ್ ಹಿಂದೂ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬಿಜೆಪಿ ವಿರುದ್ಧ ರೂಪುಗೊಂಡಿರುವ ಇಂಡಿಯಾ ಒಕ್ಕೂಟದ ಪಾಲುದಾರ ಕಾಂಗ್ರೆಸ್ ನಾಯಕ, ಸಿಎಂ ಸಿದ್ದರಾಮಯ್ಯ ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ವೇಳೆ ತಿಲಕ ಧಾರಣೆಗೆ ಮಾಡಿಕೊಳ್ಳಲು ನಿರಾಕರಿಸಿದ್ದಾರೆ.
ಹೈದರಾಬಾದ್ನಲ್ಲಿ ಆಗಿದ್ದೇನು: ಶನಿವಾರ ಸಿಡಬ್ಲ್ಯುಸಿ ಸಭಾಂಗಣಕ್ಕೆ ಸಿದ್ದರಾಮಯ್ಯ ಆಗಮಿಸಿದಾಗ ಅವರಿಗೆ ಸ್ವಾಗತ ಮಾಡುವಾಕೆ ಗಂಧದ ಬೊಟ್ಟು ಹಚ್ಚಿ ಆರತಿ ಮಾಡಲು ಮುಂದಾದಾಗ, ಸಿದ್ದರಾಮಯ್ಯ ತಿಲಕಕ್ಕೆ ನಿರಾಕರಿಸುತ್ತಾರೆ. ಸ್ವಾಗತ ಮಾಡಿದಾಕೆ ಆಗ ಆರತಿಯನ್ನಷ್ಟೇ ಮಾಡಿದ್ದಾರೆ. ಇದನ್ನು ಪಕ್ಕದಲ್ಲೇ ಇದ್ದ ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಹಾಗೂ ಇತರರು ಮೂಕಪ್ರೇಕ್ಷಕರಂತೆ ನೋಡುತ್ತಿದ್ದರು ಎನ್ನಲಾಗಿದೆ.
ಸಿಎಂ ಅನ್ನು ಟೀಕಿಸಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ‘ಮಮತಾ ದೀದಿಯ ನಂತರ ಈಗ ಸಿದ್ದರಾಮಯ್ಯ ತಿಲಕ ಧಾರಣೆಗೆ ನಿರಾಕರಿಸಿದ್ದಾರೆ. ಟೋಪಿ (ಮುಸ್ಲಿಂ ಟೋಪಿ) ಹಾಕುವುದು ಸರಿ. ಆದರೆ ತಿಲಕ ಧಾರಣೆ ಸರಿ ಅಲ್ಲವೆ? ಏಕೆಂದರೆ ಮುಂಬೈನಲ್ಲಿ ಹಿಂದೂಗಳು ಮತ್ತು ಸನಾತನ ಧರ್ಮದ ಮೇಲೆ ದಾಳಿ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ ಎಂದಿದ್ದಾರೆ ಎಂದು ಹೇಳಿದೆ.
ಉದಯನಿಧಿ ಸ್ಟಾಲಿನ್ನಿಂದ ಎ. ರಾಜಾ ಹಾಗೂ ಜಿ. ಪರಮೇಶ್ವರರರಿಂದ ಪ್ರಿಯಾಂಕ್ ಖರ್ಗೆವರೆಗೆ, ಆರ್ಜೆಡಿಯಿಂದ ಎಸ್ಪಿವರೆಗೆ – ‘ಕರೋ ಹಿಂದೂ ಆಸ್ಥಾ ಪೆ ಚೋಟ್, ಔರ್ ಕೋ ಮತಬ್ಯಾಂಕ್ ಕಾ ವೋಟ್’ (ಹಿಂದೂ ನಂಬಿಕೆಗೆ ಘಾಸಿ ಮಾಡುವುದು, ಮತ ಬ್ಯಾಂಕ್ಗೆ ಮಣೆ ಹಾಕುವುದು) ತಂತ್ರ ಇದಾಗಿದೆ ಎಂದು ಬಿಜೆಪಿ ಟೀಕಿಸಿದೆ.
ಸಿದ್ದರಾಮಯ್ಯ ಗಂಧದ ಬೊಟ್ಟು ಹಚ್ಚುವುದನ್ನು ನಿರಾಕರಿಸಿರುವ ವಿಡಿಯೋವನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ಕೂಡ ಹಂಚಿಕೊಂಡಿದ್ದು, ಚುನಾವಣೆ ವೇಳೆ ದೇವಸ್ಥಾನಗಳಿಗೆ ಸುತ್ತಾಟ ನಡೆಸುವ ಸಿದ್ದರಾಮಯ್ಯ ಇದೀಗ ತಿಲಕ ಹಚ್ಚುವುದನ್ನು ನಿರಾಕರಿಸಿದ್ದಾರೆ. ಇದು ಅವರ, ಕಾಂಗ್ರೆಸ್ ಪಕ್ಷದ ದ್ವಂದ್ವ ಮಾನಸಿಕತೆ ಸಾಕ್ಷಿ ಎಂದು ಹೇಳಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…