ಬೆಂಗಳೂರು: ವಿಧಾನಸೌಧದಲ್ಲಿ ಕುಸಿದು ಬಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯ ಸದ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ವೈದ್ಯ ಮೂಲಗಳು ಮಾಹಿತಿ ನೀಡಿವೆ. ಸದ್ಯ ಬಿಪಿ ಕೂಡ ಕಂಟ್ರೋಲ್ ಗೆ ಬಂದಿದೆ. ಇಂದು ಮಧ್ಯಾಹ್ನದ ವೇಳೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಬಹುದೆಂದು ವೈದ್ಯರು ತಿಳಿಸಿದ್ದಾರೆ. ಎರಡು ಮೂರು ದಿನ ರೆಸ್ಟ್ ಮಾಡುವಂತೆ ಸೂಚಿಸಿದ್ದಾರೆ.
ಈ ಕುರಿತು ಸಿಎಂ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಮಾಡಿ, ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ವಿಧಾನಸಭೆಯ ಸಭಾಧ್ಯಕ್ಷರಾದ ಯುಟಿ ಖಾದರ್ ಅವರು ಈ ವೇಳೆ ಉಪಸ್ಥಿತರಿದ್ದರು ಎಂದು ಬರೆಯಲಾಗಿದೆ. ಸಿಎಂ
ಇನ್ನು ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಆರೋಗ್ಯ ವಿಚಾರಿಸಿದ್ದಾರೆ.