News Karnataka Kannada
Monday, April 29 2024
ಬೆಂಗಳೂರು

ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ

Compensation disbursed to families of deceased KSRTC employees
Photo Credit : News Kannada

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು.

ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಪುತ್ತೂರು ವಿಭಾಗದ ಧರ್ಮಸ್ಥಳ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅಶೋಕ್ ಕುಮಾರ್,ಮೈಸೂರು ವಿಭಾಗದ ವಿಜಯನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಬಿ.ಎಂ ಪುಟ್ಟಸ್ವಾಮಿ ಹಾಗು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-5ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ರಮೇಶ ಜಿ. ಅವರು ಮೃತಪಟ್ಟವರು.

ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.

ಪರಿಹಾರ ವಿತರಣೆ ಹಾಗೂ ಗೌರವ ಸಲ್ಲಿಕೆ ಸಮಾರಂಭದಲ್ಲಿ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿ ದೇವಿ ಕೆ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು