ಬೆಂಗಳೂರು: ಕಳೆದ ದಿನ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಶಿವಕುಮಾರ್ ವಿರುದ್ಧ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದೆಲ್ಲ ಗಂಭೀರ ಆರೋಪಗಳನ್ನು ಮಾಡಿ ಏಕವಚನದಲ್ಲಿ ಗುಡುಗಿದ್ದರು.
ಈ ವಿಷಯದ ಕುರಿತಾಗಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ರಿಂದ ದೂರು ದಾಖಲಾಗಿದೆ. ಕಳೆದ ದಿನ ಸುದ್ದಿಗೋಷ್ಠಿಯಲ್ಲಿ ಬಳಸಿದ ಪದಗಳ ಬಗ್ಗೆ ದೂರಿನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಆಧಾರ ರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.