News Karnataka Kannada
Monday, April 29 2024
ಬೆಂಗಳೂರು

ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ  ಸಮ್ಮುಖದಲ್ಲಿ  ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ.
Photo Credit : News Kannada

ಬೆಂಗಳೂರು: ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ  ಸಮ್ಮುಖದಲ್ಲಿ  ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ.

50 ವರ್ಷಗಳಿಂದ ಕಾಂಗ್ರೆಸ್​ನಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆಗೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆ ಆಗಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಮನೋಹರ್‌ ತಹಸೀಲ್ದಾರ್‌ ಅವರು ನಾಗರಿಕ ಸ್ನೇಹಿ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಅವರದ್ದೇ ಆದ ವೋಟ್‌ ಬ್ಯಾಂಕ್‌ ಹೊಂದಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕರೆತರಲಾಗಿದೆ.

ಈಗಾಗಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಮನೋಹರ್ ತಹಶೀಲ್ದಾರ್​, ಹಾವೇರಿಗೆ ಒಳ್ಳೆ ಅಭ್ಯರ್ಥಿ ಬೇಕು ಎನ್ನುವ ಮಾತು ಇದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡಿದಾರೆ. ಅವರು ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು. ಇದು ಜನರ ಅಭಿಪ್ರಾಯ ನಮ್ಮ ಅಭಿಪ್ರಾಯವೂ ಹೌದು. ನಾವು ಬೊಮ್ಮಾಯಿ ಅವರನ್ನ ಲೋಕಸಭಾ ಸದಸ್ಯರನ್ನಾಗಿ ಮಾಡಿ ಕಳಿಸುತ್ತೇವೆ ಎಂದು ಹೇಳಿದ್ದಾರೆ.

ಎಲ್ಲರೂ ಒಪ್ಪಿದ್ದಕ್ಕೆ ಬಿಜೆಪಿಗೆ ಬಂದಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಇರುವಷ್ಟು ಕಾಲ ಅವರೊಂದಿಗೆ ಇರೋಣ ಅಂತ ಬಂದಿದ್ದೇನೆ. ಯಾವುದೇ ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಗೌರವ ಕೊಡಿ ಅಂತ ಅಷ್ಟೇ ಕೇಳಿದ್ದೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು