ರಾಜರಾಜೇಶ್ವರಿ ನಗರದಲ್ಲಿ ವಿದ್ಯಾರ್ಥಿಗಳಿಂದ ಸಂವಿಧಾನ ಜಾಗೃತಿ ಅಭಿಯಾನ

ಬೆಂಗಳೂರು: ಸಂವಿಧಾನ ರಚನೆಗೊಂಡು 75 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ “ಸಂವಿಧಾನ ಜಾಗೃತಿ ರಥಯಾತ್ರೆಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೋಪಾಲನ್‌ ಆರ್ಕೇಡ್‌ನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಆಚರಿಸಲಾಯಿತು.

ಎಲ್ಲಾ ವಿದ್ಯಾರ್ಥಿಗಳು ಒಟ್ಟು ಸೇರಿ ಗೋಪಾಲನ್‌ ಆರ್ಕೇಡ್‌ನಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿದರು, ಸಂವಿಧಾನದಲ್ಲಿರುವ ನಮ್ಮ ಹಕ್ಕಿನ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಇದಷ್ಟೇ ಅಲ್ಲದೆ, ಸಂವಿಧಾನ ನಮಗೆ ಏನೆಲ್ಲಾ ನೀಡುತ್ತಿದೆ ಎಂಬುದರ ಬಗ್ಗೆಯೂ ಸಹ ಬೀದಿ ನಾಟಕ ಮಾಡುವ ಮೂಲಕ ಜಾಗೃತಿ ಮೂಡಿಸಿದರು, ಇನ್ನೂ ಕೆಲ ವಿದ್ಯಾರ್ಥಿಗಳು ಇತರೆ ಸಾಂಸ್ಕೃತಿಕ ನೃತ್ಯ, ಕಾರ್ಯಕ್ರಮದ ನಿರೂಪಣೆ, ಮಾಡಿದರು.

ಈ ಜಾಗೃತಿ ಅಭಿಯಾನದಲ್ಲಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಸಂವಿಧಾನದ ಕುರಿತು ಭಾಷಣ ಮಾಡಿದರು. ಕೊನೆಯದಾಗಿ ಹ್ಯಾಲೊಜೆನ್‌ ಆಕಾಶ ಬುಟ್ಟಿಗಳನ್ನು ಆಕಾಶದಲ್ಲಿ ಹಾರಿ ಬಿಟ್ಟರು. ಒಟ್ಟಾರೆ ನಮ್ಮ ಸಂವಿಧಾನ ನಮಗೆ ಏನೆಲ್ಲಾ ನೀಡಿದೆ ಎಂಬುದರ ಬಗ್ಗೆ ಜನರಿಗೆ ತಿಳಿಸಲು ವೈವಿಧ್ಯವಾಗಿ ಕಾರ್ಯಕ್ರಮ ನಡೆಸಲಾಯಿತು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಯುವ ಉದ್ದೇಶದಿಂದ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ದ ಸ್ಥಬ್ಧಚಿತ್ರ ಮೆರವಣಿಗೆ ನಡೆಸಲಾಗುತ್ತಿದೆ. ಜಿಲ್ಲಾ ಕೇಂದ್ರಗಳಿಂದ ಹೊರಡುವ ಈ ಜಾಥವು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಇತರೆ ಕಚೇರಿಗಳಿಗೆ ಭೇಟಿ ನೀಡಿ ಪ್ರತಿ ಜಿಲ್ಲೆಯ ಮೂಲೆ ಮೂಲೆಯಲ್ಲೂ ಸಂಚರಿಸುತ್ತಿದೆ,

ಈಗಾಗಲೇ ಹಾಸನ, ಬೆಳಗಾವಿ, ವಿಜಯಪುರ, ಬೆಂಗಳೂರು, ಯಾದಗಿರಿ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ವಿಜಯನಗರ, ಚಿಕ್ಕಬಳ್ಳಾಪುರ, ಕಲುಬುರ್ಗಿ, ಶಿವಮೊಗ್ಗ, ಗದಗ, ಧಾರವಾಡ, ಬಳ್ಳಾರಿ, ಮೈಸೂರು, ಬಾಗಲಕೋಟೆ, ರಾಯಚೂರು, ಉಡುಪಿ, ಬೀದರ್‌, ತುಮಕೂರು ಜಿಲ್ಲೆಗಳಲ್ಲಿ ರಥಯಾತ್ರೆ ಪೂರ್ಣಗೊಂಡಿದೆ.

ಈ ರಥಯಾತ್ರೆ ಸಂದರ್ಭದಲ್ಲಿ ಸಾವಿರಾರು ಜನಸಾಮಾನ್ಯರು ಪಾಲ್ಗೊಂಡು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಘೊಷಣೆ ಕೂಗುತ್ತಾ, ಯಾತ್ರೆ ಬರುತ್ತಿರುವ ಸ್ಥಳಗಳಲ್ಲಿ ಮಹಿಳೆಯರು ರಂಗೋಲಿ ಬಿಡಿಸಿ, ವಿದ್ಯಾರ್ಥಿಗಳು ಸಂವಿಧಾನವನ್ನು ಓದುವ ಮೂಲಕ ಸಂವಿಧಾನವು ನಮಗೆ ನೀಡಿರುವ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸಿದರು. ಇನ್ನೂ ಕೆಲವೆಡೆ ರಾಷ್ಟ್ರದ್ವಜದ ತ್ರಿವರ್ಣ ಬಣ್ಣಗಳ ಬಲೂನ್‌ಗಳನ್ನು ಹಾರಿಸಿದರು.

ಇನ್ನೂ ಕೆಲವೆಡೆ ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನಗಳನ್ನು ಮಾಡಲಾಯಿತು. ಜಾಥದಲ್ಲಿ ಸಂಚರಿಸಲಿರುವ ಎಲ್‌ಇಡಿ ವಾಹನಗಳ ಮೂಲಕ ವಿಡಿಯೊ ಪ್ರದರ್ಶನ ಮಾಡುವ ಮೂಲಕ ನಮ್ಮ ಪರಂಪರಯನ್ನು ಅನಾವರಣಗೊಳಿಸಗುತ್ತಿದೆ. ಹೀಗೆ ಪ್ರತಿ ಜಿಲ್ಲೆಯಲ್ಲೂ ವಿಭಿನ್ನ ಹಾಗೂ ವಿಶೇಷ ರೀತಿಯಲ್ಲಿ ಭಾರತದ ಪ್ರಜೆಗಳಾದ ನಾವು, ಸಂವಿಧಾನ ತಿಳಿಯೋಣ, ಸಂವಿಧಾನ ಉಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಜಾಥ ಸಾಗಿತು. ಜಾಥದಲ್ಲಿ ಪ್ರತಿಯೊಬ್ಬರು ಭಾಗಿಯಾದರು, ಇನ್ನೂ ಫೆ.23 ರವರೆಗೆ ಜಾಥ ಮುಂದುವರೆಯಲಿದೆ.

Ashika S

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

6 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

13 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

31 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

36 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

51 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

57 mins ago