ಬೆಂಗಳೂರು: ಇದೀಗ ಮುಂಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವಡೆ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಕನಿಷ್ಠ 600 ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದಾರೆ.
ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ”ಇಂದಿರಾ ಕ್ಯಾಂಟೀನ್ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟಾಕ್ಸಿ ಮತ್ತು ಇತರೆ ಚಾಲಕರ ಮನವಿ ಮೇರೆಗೆ ಇಂದು ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್ ನಿರ್ಮಿಸಲಾಗಿದೆ. ಇದೀಗ ಒಟ್ಟು 188 ಇಂದಿರಾ ಕ್ಯಾಂಟೀನ್ಗಳನನ್ನು ನಿರ್ಮಿಸಲು ಆರಂಭಿಸಲಾಗಿದೆ ಈಗಾಗಲೇ 40 ಕ್ಯಾಂಟೀನ್ ಗಳು ಪೂರ್ಣಗೊಂಡಿದ್ದು ಉಳಿದ ಕ್ಯಾಂಟೀನ್ಗಳು ಆದಷ್ಟು ಬೇಗ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್ನ ಅಗತ್ಯವಿದೆ ಹೀಗಾಗಿ ಮತ್ತೊಂದು ಕಾಂಟೀನ್ನ್ನು ಕೂಡ ಶೀಘ್ರದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು. ಹಾಗೂ ಮೆನುಗಳಲ್ಲೂ ಬದಲಾವಣೆಗೊಳಿಸಲಾಗಿದೆ ಮತ್ತು ಊಟದ ಹಾಲ್ಗಳನ್ನು ವಿಶಾಲವಾಗಿ ನಿರ್ಮಿಸಲಾಗಿದೆ ಎಂದರು.
ಬೆಂಗಳೂರು ಮತ್ತು ರಾಜ್ಯದ ಇತರೆ ಪ್ರದೇಶಗಳಲ್ಲಿ ಕ್ಯಾಂಟೀನ್ ನಿರ್ಮಿಸಲಾಗುವುದು, ಹಿಂದಿನ ಸರ್ಕಾರದ ಕ್ಯಾಂಟೀನ್ಗಳನ್ನು ಈಗಾಗಲೇ ಹಲವೆಡೆ ಮುಚ್ಚಲಾಗಿದೆ. ಆದರೆ ಈ ಬಾರಿ ಬಡವರ ಹೊಟ್ಟೆ ತುಂಬಿಸುವ ಉದ್ದೇಶ ಹೊತ್ತು ಈ ಯೋಜನೆಯನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.
ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…
ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…
ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…
ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…
ಲುಗು ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್ ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ…