ಬೆಂಗಳೂರು: ಪೋಷಕರು ತಮ್ಮ ಪ್ರೀತಿಗೆ ನಿರಾಕರಿಸಿದರೆಂದು ಯುವ ಪ್ರೇಮಿಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಮೃತ ದುರ್ಧೈವಿಗಳು.

ವಿವಾಹಿತ ಶ್ರೀಕಾಂತ್ ಮತ್ತು ವಿದ್ಯಾರ್ಥಿನಿ ಅಂಜನಾ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು ಆದರೆ ಅವರ ಪ್ರೀತಿಗೆ ಪೋಷಕರ ಒಪ್ಪಿಗೆ ಇಲ್ಲದ ಕಾರಣ ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಪತ್ತೆ ಹಿನ್ನಲೆ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೀಗ ಶ್ರೀಕಾಂತ್​ ಮತ್ತು ಅಂಜನಾ ಮೃತದೇಹ ನೈಸ್ ರಸ್ತೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ.