ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್ ಡಿ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬುದವಾರ ಅವರನ್ನು ಮತ್ತೆ ಜನಪ್ರತಿನಿಧಿ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್ ಅವರು ವಾದ ಮಂಡಿಸಿದ್ದಾರೆ.
ಕಸ್ಟಡಿ ವಿಚಾರಣೆ ವೇಳೆ ರೇವಣ್ಣ ತಮ್ಮ ಪ್ರಶ್ನೆಗೆ ಸರಿಯಾಗಿ ಸ್ಪಂಧಿಸಿಲ್ಲ, ಬಹುತೇಕ ಪ್ರಶ್ನೆಗಳಿಗೆ ಉತ್ತರವನ್ನೇ ನೀಡಿಲ್ಲ. ಒಂದು ವೇಳೆ ಜಾಮೀನು ಮಂಜೂರು ಮಾಡಿದರೆ ಸಾಕ್ಷ್ಯವನ್ನು ನಾಶ ಪಡಿಸುವ ಸಾಧ್ಯತೆ ಇದೆ. ಹಾಗಾಗಿ ಜಾಮೀನು ನೀಡದೆ , ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದೆ. ಈ ಹಿನ್ನಲೆಯಲ್ಲಿ ಕೋರ್ಟ್ ವಿಚಾರಣೆಯನ್ನ ನಾಳೆಗೆ ಮುಂದೂಡಿದೆ