ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮಹಾಮಾರಿ ಮತ್ತೆ ಎಲ್ಲೆ ಮೀರುತ್ತಿದೆ. ಮಂಗಳವಾರ ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ವಿಕಾಸಸೌಧದಲ್ಲಿ ಸುದ್ದಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇರಳದಲ್ಲಿ ಐದು ಜನರ ಸಾವು ಆಗಿದೆ. ಹಾರ್ಟ್, ಕ್ಯಾನ್ಸರ್ ಸಮಸ್ಯೆ ಇದ್ದವರಿಗೆ ಕೋವಿಡ್ ಆದಾಗ ಸಾವು ಆಗಿದೆ. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಟಿಬಿ ಕಾಯಿಲೆ ಕೂಡಾ ಇತ್ತು, ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಅವರ ಸಾವು ಆಗಿದೆ. ಮಲ್ಲಿಗೆ ಆಸ್ಪತ್ರೆಯಲ್ಲಿ ಚಾಮರಾಜಪೇಟೆಯ ವ್ಯಕ್ತಿ ಸಾವಾಗಿದೆ ಎಂದು ವಿವರಿಸಿದ್ದಾರೆ.