News Karnataka Kannada
Monday, April 29 2024
ಬೆಂಗಳೂರು

ಕಾಡಾನೆ ಹಾವಳಿಗೆ ಬೆಳೆ ಹಾನಿ: ರೈತರಿಗೆ ಸೂಕ್ತ ಪರಿಹಾರ ನೀಡಲು ಆರ್. ಅಶೋಕ್ ಆಗ್ರಹ

ಕನಕಪುರ, ರಾಮನಗರದಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
Photo Credit : News Kannada

ಬೆಂಗಳೂರು: ಕನಕಪುರ, ರಾಮನಗರದಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಬೆಳೆ ಹಾನಿಯಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿರುವ  ಅವರು ಕಾಡಾನೆ ದಾಳಿಯಿಂದ ಒಬ್ಬ ಮಹಿಳೆ ಸೇರಿದಂತೆ ಮೂರು ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ.ಕಾಡಂಚಿನಲ್ಲಿರುವ ಗ್ರಾಮಗಳ ಜನರು ಮನೆಯಿಂದ ಹೊರಬರಲಾರದಂಥ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಕೂಡಲೇ ಎಚ್ಚೆತ್ತುಕೊಂಡು ಆನೆ ಸೆರೆ ಕಾರ್ಯಾಚರಣೆಗೆ ಆದೇಶ ನೀಡಿ ರೈತರ ಜೀವ ರಕ್ಷಣೆ ಮಾಡಬೇಕು. ಹಾಗೆಯೇ ಕಾಡಾನೆ ದಾಳಿಯಿಂದ ಬೆಳೆ ನಾಶವಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಸುಮಾರು ಮೂವತ್ತಕ್ಕೂ ಹೆಚ್ಚು ಕಾಡಾನೆಗಳು ಕನಕಪುರ ಹಾಗೂ ರಾಮನಗರ ಸುತ್ತಮುತ್ತಲಿನ ಗ್ರಾಮಗಳ ಸಮೀಪ ಬೀಡು ಬಿಟ್ಟಿರುವ ಮಾಹಿತಿ ಇದೆ ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು