News Karnataka Kannada
Monday, May 06 2024
ಬೆಂಗಳೂರು

ಕರ್ನಾಟಕದ ಮನವಿ ಪುರಸ್ಕರಿಸಿದ ಸಿಡಬ್ಲ್ಯೂ ಆರ್ ಸಿ: ಸಧ್ಯಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಇಲ್ಲ

ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA- ಸಿ ಡಬ್ಲ್ಯೂ ಆರ್ ಸಿ) ಒಪ್ಪಿಕೊಂಡಿದೆ.
Photo Credit : News Kannada

ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA- ಸಿ ಡಬ್ಲ್ಯೂ ಆರ್ ಸಿ) ಒಪ್ಪಿಕೊಂಡಿದೆ.

ದೆಹಲಿಯಲ್ಲಿ ನಡೆದ ಸಿಡಬ್ಲ್ಯುಎಂಎ ಸಭೆಯಲ್ಲಿ ಕರ್ನಾಟಕ ಅಧಿಕಾರಿಗಳು, ರಾಜ್ಯದ ಜಲಾಶಯಗಳ ಸದ್ಯದ ಸ್ಥಿತಿಯನ್ನು ಪ್ರಾಧಿಕಾರದ ಗಮನಕ್ಕೆ ತಂದಿದ್ದಾರೆ.

ಎರಡೂ ರಾಜ್ಯಗಳಲ್ಲಿನ ಜಲಾಶಯಗಳಲ್ಲಿನ ಉಪಯುಕ್ತ ಸಂಗ್ರಹಣೆಯನ್ನು ಪರಿಗಣಿಸಿದ ಸಿಡಬ್ಲ್ಯುಎಂಎ-ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕರ್ನಾಟಕದಿಂದ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ.

2024ರ ಮೇ ಅಂತ್ಯದವರೆಗೆ 18 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಮಿಳುನಾಡು ಒತ್ತಾಯಿಸಿತ್ತು. ಆದರೆ ನೀರಾವರಿ ಅವಧಿಯು ಜನವರಿ 31ಕ್ಕೆ ಕೊನೆಗೊಂಡಿರುವ ಅಂಶವನ್ನು ಮತ್ತು ಎರಡೂ ರಾಜ್ಯಗಳಲ್ಲಿನ ಜಲಾಶಯಗಳಲ್ಲಿನ ಉಪಯುಕ್ತ ಸಂಗ್ರಹಣೆಯನ್ನು ಪರಿಗಣಿಸಿದ ಸಿ ಡಬ್ಲ್ಯೂ ಆರ್ ಸಿ, ಕರ್ನಾಟಕದಿಂದ ನೀರು ಬಿಡುಗಡೆಗೆ ಯಾವುದೇ ನಿರ್ದೇಶನ ನೀಡಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು