ಬೆಂಗಳೂರು: ನಗರದಲ್ಲಿ ಮೀಟರ್ ಬಡ್ಡಿ ದಂಧೆ ಪ್ರಕರಣ ಬೆಳಕಿಗೆ ಬಂದಿದ್ದು, ಸಿಸಿಬಿ ಪೊಲೀಸರು ಮೂವರು ಸೈಕಲ್ ರವಿ ಸಹಚರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದ ರಂಗನಾಥ್ ಎಂಬವರು ಆರೋಪಿ ಮಂಜುನಾಥ್ 23 ಲಕ್ಷ ಹಣವನ್ನ ಬಡ್ಡಿಗೆ ಸಾಲ ಪಡೆದಿದ್ದರು. 23 ಲಕ್ಷ ಹಣವನ್ನ ಬಡ್ಡಿ ಸಮೇತ ರಂಗನಾಥ್ ಹಿಂದಿರುಗಿಸಿದ್ದರು. ಆದರೆ ಮಂಜುನಾಥ್ ನಾನು ಮೀಟರ್ ಬಡ್ಡಿಗೆ ಹಣವನ್ನ ಕೊಟ್ಟಿರುವುದು. ಇನ್ನೂ 5 ಲಕ್ಷ ಹಣವನ್ನ ನೀನು ಕೊಡಬೇಕು ಎಂದು ಪಟ್ಟು ಹಿಡಿದಿದ್ದ. ಐದು ಲಕ್ಷ ಹಣವನ್ನ ರಂಗನಾಥ್ ಕೊಡಲು ನಿರಾಕರಿಸಿದರು.
ಈ ಸಾಲದ ವಸೂಲಿ ಮಾಡಿಕೊಡಲು ಸೈಕಲ್ ರವಿ ಸಹಚರನಾದ ಉಮೇಶ್ಗೆ ಮಂಜುನಾಥ್ ಹೇಳಿದ್ದ. ಉಮೇಶ್ ತನ್ನ ಸಹಚರನಾದ ಸುರೇಶ್ ಜೊತೆ ಮೀಟರ್ ಬಡ್ಡಿ ವಸೂಲಿಗೆ ಮುಂದಾಗಿದ್ದ. ಈ ವಿಚಾರ ತಿಳಿದ ಸಿಸಿಬಿ ಪೊಲೀಸರು ಉಮೇಶ್, ಸುರೇಶ್ ಹಾಗೂ ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.
ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…
ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…