ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಡಿಸೆಂಬರ್ 30ರಂದು ಚಿತ್ರದುರ್ಗದಲ್ಲಿ ಅಹಿಂದ ಸಮಾವೇಶ ನಡೆಸಿ ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಅವರು ಕೂಡ ಜನವರಿ ತಿಂಗಳಿನಲ್ಲೇ ಸಮಾವೇಶ ನಡೆಸಲು ತಯಾರಿ ನಡೆಸಿದ್ದಾರೆ.
ಸಿದ್ದರಾಮೋತ್ಸವ ಮಾದರಿಯಲ್ಲೇ ಮತ್ತೊಂದು ಬೃಹತ್ ಸಮಾವೇಶ ನಡೆಸಲು ಸಿದ್ದರಾಮಯ್ಯ ಬಣ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ.
ಜಾತಿ ಜನಗಣತಿ ಜಾರಿಗೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಡಿಸೆಂಬರ್ 30 ರಂದು ಸಿದ್ದರಾಮಯ್ಯ ಅವರ ಆಪ್ತರು ಬೃಹತ್ ಸಮಾವೇಶಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅಹಿಂದ ಸಮಾವೇಶ, ಸಿದ್ದರಾಮೋತ್ಸವ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸಿದ್ದರಾಮಯ್ಯ ಬಲವರ್ಧನೆಗೆ ಸಿದ್ದರಾಮಯ್ಯ ಆಪ್ತರು ವೇದಿಕೆ ಸಿದ್ಧಪಡಿಸುತ್ತಿದ್ದಾರೆ.
ಜನವರಿಯಲ್ಲಿ ಮತ್ತೊಂದು ಸುತ್ತಿನ ಬೃಹತ್ ಹಿಂದುಳಿದ ಸಮಾವೇಶ ನಡೆಸಲು ಹರಿಪ್ರಸಾದ್ ಸಿದ್ಧತೆ ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲು ಸಜ್ಜಾಗುತ್ತಿದ್ದಾರೆ.