ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆಯಿತು. ಆದ್ರೆ, ಇದುವರೆಗೂ ಬಿಜೆಪಿಯಲ್ಲಿಯಾರು ವಿಪಕ್ಷ ನಾಯಕರಾಗುತ್ತಾರೆ ಎನ್ನುವ ಚರ್ಚೆಗಳು ನಡೆಯುತ್ತಲ್ಲೇ ಇವೆ. ವಿರೋಧ ಪಕ್ಷದ ನಾಯಕ ಅವರು ಆಗುತ್ತಾರೆ. ಇವರು ಆಗುತ್ತಾರೆ ಎನ್ನುವ ಸುದ್ದಿ ಅಷ್ಟೇ ಹರಿದಾಡುತ್ತಿದೆ. ಇದರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆಯಾಗಲಿದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇವೆಲ್ಲದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ ಅವರು ವಿರೋಧ ಪಕ್ಷದ ನಾಯಕ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗುವ ಹೆಸರುಗಳು ಘೋಷಣೆ ಮಾಡಿದ್ದಾರೆ.
ಇಂದು (ಜುಲೈ 25) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಸಿ.ಟಿ.ರವಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷರಾಗಲಿದ್ದಾರೆ. ಇನ್ನು ವಿಪಕ್ಷ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಎಂದು ಬಹುತೇಕ ತೀರ್ಮಾನವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದರು.