ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರ ವಕೀಲರ ವಾದಕ್ಕೆ ಪ್ರತಿವಾದ ಸಲ್ಲಿಸಿದಂತ ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ವಾದವನ್ನು ಆಲಿಸಿದಂತ ನ್ಯಾಯಪೀಠವು, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈ ಮೂಲಕ ನಟ ದರ್ಶನ್ ಗೆ ಇಂದು ಶಾಕ್ ಆಗಿದೆ. ಜೈಲೇ ಗತಿ ಎನ್ನುವಂತೆ ಆಗಿದೆ.

ಕೇಸ್ ಡೈರಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಮ್ಯಾಡಿಸ್ಟ್ರೇಟ್ ಕೂಡ ಕೇಸ್ ಡೈರಿಯನ್ನು ಪರಿಶೀಲಿಸಿದ್ದಾರೆ. ಕೋರ್ಟ್ ಅವಹಾಗನೆಗೂ ಕೇಸ್ ಡೈರಿಯನ್ನು ಸಲ್ಲಿಸುತ್ತಿದ್ದೇನೆ. ಆರೋಪಿಗಳ ಪರ ವಕೀಲರಗಿ ಈ ಕೇಸ್ ಡೈರಿ ನೋಡುವ ಹಕ್ಕಿಲ್ಲ. ಮ್ಯಾಜಿಸ್ಟ್ರೇಟ್ ಕೇಸ್ ಡೈರಿ ಪರಿಶೀಲಿಸಲಾಗಿದೆ ಎಂದು ಬರೆದಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.