ಬೆಂಗಳೂರು; ಪಬ್ವೊಂದರಲ್ಲಿ ಮಧ್ಯ ರಾತ್ರಿಯ ನಂತರ ಅವಧಿ ಮೀರಿ ಪಾರ್ಟಿ ಮಾಡಿದ ಆರೋಪದಲ್ಲಿ ನಟ ದರ್ಶನ್ ಅವರಿಗೆ ನೋಟಿಸ್ ನೀಡಲಾಗಿತ್ತು. ಅವರು ಶುಕ್ರವಾರ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆಯಲ್ಲಿ ಭಾಗಿ ಆಗಿದ್ದಾರೆ.
ಅವರ ಆಗಮನದ ಸುದ್ದಿ ತಿಳಿದು ಸ್ಟೇಷನ್ ಮುಂದೆ ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದಾರೆ. ದರ್ಶನ್ ಬಂದ ಕೂಡಲೇ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ‘ಕಾಟೇರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಆದರ ಖುಷಿಯಲ್ಲಿ ಅನೇಕ ಸೆಲೆಬ್ರಿಟಿಗಳ ಜೊತೆಗೂಡಿ ದರ್ಶನ್ ಅವರು ಪಾರ್ಟಿ ಮಾಡಿದ್ದರು. ನಿಯಮ ಉಲ್ಲಂಘಿಸಿ ಬೆಳಗಿನ ಜಾವದ ತನಕ ಪಬ್ನಲ್ಲಿ ಪಾರ್ಟಿ ಮಾಡಿರುವುದು ವಿವಾದಕ್ಕೆ ಕಾರಣ ಆಗಿದೆ.