ದಾವಣಗೆರೆ : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕದ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವಣಗೆರೆಗೆ ಆಗಮಿಸಲಿದ್ದು, 3 ವಿಐಪಿ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಬೆಳಿಗ್ಗೆ 11.30 ಕ್ಕೆ ದಾವಣಗೆರೆಗೆ ಆಗಮಿಸಿ ಇಲ್ಲಿಯ ತ್ರಿಶೂಲ್ ಕಲಾ ಭವನದಲ್ಲಿ ಏರ್ಪಡಿಸಿರುವ ಕಸಲಾ ರಮಾ ನಾಗರಾಜ ಮತ್ತು ಕಸಲ್ ವಿ.ನಾಗರಾಜ ಇವರ ಸಹೋದರನ ಪುತ್ರ ಚಿ.ರಾ.ವೈಭವ್ ಬಿ. ಕಸಲ್ ಮತ್ತು ಚಿ.ಸೌ.ಐಶ್ವರ್ಯ ಆರ್.ಹೆಚ್ ಇವರ ವಿವಾಹ ಮುಹೂರ್ತ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 12 ಗಂಟೆಗೆ ಶಾಮನೂರು ರಸ್ತೆಯಲ್ಲಿರುವ ಎಸ್.ಎಸ್.ಕನ್ವೆನ್ಷನ್ ಸೆಂಟರ್ ಅಲ್ಲಿ ಹಮ್ಮಿಕೊಂಡಿರುವ ಪೂರ್ಣಿಮಾ ಮತ್ತಿ ಬಿ.ಸಿ.ಚಂದ್ರಶೇಖರ್ ಇವರ ಪುತ್ರ ಚಿ.ರಾ. ವಿವೇಕ್ ಮತ್ತು ಚಿ.ಸೌ. ಮೇಹುಲ್ ಅವರ ವಿವಾಹ ಮುಹೂರ್ತ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಬಳಿಕ ಮಧ್ಯಾಹ್ನ 12.30ಕ್ಕೆ ಉಮಾ ಮತ್ತು ವೀರಯ್ಯ ದೇವಗಿರಿಮಠ ಇವರ ಪುತ್ರಿ ಚಿ.ಸೌ ಪ್ರಣವಿ (ಮೇಘನಾ) ಮತ್ತು ಚಿ.ರಾ. ಶ್ರೇಯಸ್ ಅವರ ವಿವಾಹ ಅಕ್ಷತಾರೋಹಣ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಕ್ಕೆ ದಾವಣಗೆರೆಯಿಂದ ಹೊರಟು 6 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.