ಈಶ್ವರಪ್ಪನವರು ಹಠಕ್ಕೆ ಬೀಳದೇ ರಾಜೀನಾಮೆ ಕೊಡಬೇಕು; ಎಚ್.ಡಿ.ಕುಮಾರಸ್ವಾಮಿ

ದಾವಣಗೆರೆ : ಈಶ್ವರಪ್ಪನವರು ಹಠಕ್ಕೆ ಬೀಳದೇ ರಾಜೀನಾಮೆ ಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡ್​ ಗ್ರಾಮದಲ್ಲಿ ಮಾತನಾಡಿದ ಅವರು ರಾಜೀನಾಮೆ ಕೊಟ್ಟ ನಂತರ ಇವರ ಪಾತ್ರವೇನು ಇಲ್ಲ ಎಂಬುದನ್ನು ಅವರೇ ಸಾಬೀತುಪಡಿಸಬೇಕು ಎಂದರು.

ಬಿಜೆಪಿ ಪಕ್ಷದ ಜವಾಬ್ದಾರಿಯೂ ಆಗಿದ್ದು, ಈಗಾಗಲೇ 40 ಪರ್ಸೆಂಟ್​ ಬಗ್ಗೆ ಎಲ್ಲರಿಗೂ ಗೊತ್ತು, 4 ಕೋಟಿ ಕೆಲಸವನ್ನು ವರ್ಕ್​ ಆರ್ಡರ್​ ಇಲ್ಲದೇ ಇವರಿಗೆ ಅಧಿಕಾರ ನೀಡಿದ್ದು ಯಾರು, ಈ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿದರು.

ನಿನ್ನೆ ಉಡುಪಿಗೆ ಹೋದಾಗ ಇವರ ಜೊತೆಯಲ್ಲಿ ಇಬ್ಬರು ಸ್ನೇಹಿತರು ಹೋಗಿದ್ದರು. ಅವರು ಹೋಗಿದ್ದು ನೋಡಿದರೆ ಮೇಲ್ನೋಟಕ್ಕೆ ಸಂಶಯಕ್ಕೆಡೆ ಮಾಡಿಕೊಡುತ್ತದೆ. ಪ್ರಕರಣದಲ್ಲಿ ಈಶ್ವರಪ್ಪನವರೇ ಮೊದಲು ರಾಜೀನಾಮೆ ಕೊಡಬೇಕು. ಇನ್ನು ಮಲಗಿದ್ದ ಕಾಂಗ್ರೆಸ್​ನವರು ಅರ್ಧಗಂಟೆಯಲ್ಲೇ ಎದ್ದು ಪ್ರತಿಭಟನೆ ಮಾಡಿದ್ದಾರೆ. ಇದು ಸಂಶಯಕ್ಕೆಡೆಮಾಡಿಕೊಟ್ಟಿದೆ ಎಂದರು.

ನರೇಂದ್ರ ಮೋದಿಯ ನಾನು ತಿನ್ನಲ್ಲ ಬೇರೆಯವರಿಗು ಬಿಡೋಲ್ಲ ಎಂಬುದನ್ನು ಸಾಬೀತು ಪಡಿಸಬೇಕಿದೆ. ಪರ್ಸೆಂಟೇಜ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದಾನೆ ಎಂದು ಮಾಹಿತಿ ಇದೆ.ಉತ್ತಮ ಪೊಲೀಸ್ ಅಧಿಕಾರಿಗಳನ್ನು ಹಾಕಿ ವಾಸ್ತವಾಂಶ ತನಿಖೆ ಮಾಡಿಸಬೇಕು ಎಂದ ಅವರು, 40 ಪರ್ಸೆಂಟೇಜ್ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್​ ಅವರಿಗೂ ಗೊತ್ತು ಎಂದು ಕಾಂಗ್ರೆಸ್​ಗೆ ಟಾಂಗ್​ ನೀಡಿದರು.

Gayathri SG

Recent Posts

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

6 mins ago

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

19 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

20 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

45 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 hour ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago