ದಾವಣಗೆರೆ : ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಎಂ.ಪಿ. ರೇಣುಕಾಚಾರ್ಯ ಕೂಡ ಸಚಿವರಾಗಲು ಸಮರ್ಥರಿದ್ದಾರೆ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ರೇಣುಕಾಚಾರ್ಯ ಪರ ಬ್ಯಾಟ್ ಬೀಸಿದ್ದಾರೆ.
ದಾವಣಗೆರೆ ಜಿಲ್ಲೆ ಅರಕೆರೆಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ನಮಗೆ ಕಾಂಗ್ರೆಸ್, ಜೆಡಿಎಸ್ ನಿಂದ ಬಂದ ಶಾಸಕರ ಬೆಂಬಲ ಇದೆ. ಬೆಂಬಲ ನೀಡಿದ ಶಾಸಕರನ್ನು ನಾವು ಬಿಡಲು ಆಗಲ್ಲ. ಸರ್ಕಾರ ಉಳಿಸುವ ಕೆಲಸವನ್ನು ಹೈಕಮಾಂಡ್ ಮಾಡುತ್ತೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಉಳಿದ ಸಚಿವ ಸ್ಥಾನವನ್ನು ಸೂಕ್ತರಿಗೆ ವರಿಷ್ಠರು ನೀಡುತ್ತಾರೆ. ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೆ ಯೋಗ್ಯರಿದ್ದಾರೆ. ಯಾರಿಗೆ ಸ್ಥಾನ ಅಂತ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರಿಂದ ಪಕ್ಷ ಸಂಘಟನೆ ಅನ್ನೋದನ್ನು ಗಮನಿಸಬೇಕು. ಅಲ್ಲಿಯವರೆಗೂ ಬಾಯಿ ಮುಚ್ಚಿಕೊಂಡು ಇರಲು ಹೇಳಿರುವೆ. ಕೆಲವರು ಸಚಿವ ಸ್ಥಾನ ತ್ಯಾಗ ಮಾಡಬೇಕಿದೆ ಎಂದು ಹೇಳಿದರು.
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…
ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ…
ತಾಲ್ಲೂಕಿನಲ್ಲಿ ಸದ್ಯ ಚಲಾವಣೆಯಲ್ಲಿರುವ ಯಾವುದೇ ನೋಟು ಬಂದ್ ಆಗದಿದ್ದರೂ ₹100ರ ಮುಖ ಬೆಲೆಯ ಹಳೆ ಮಾದರಿ ನೋಟು ಹಾಗೂ ₹10…
ಕಳೆದ ಮೂರು ದಿನಗಳಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗಿದೆ. ಹಿಮಾಚಲ ಪ್ರದೇಶದಲ್ಲೂ ಗುಡುಗು ಸಮೇತ ಮಳೆ ಸುರಿಯುತ್ತಿದೆ. ಇಷ್ಟೇ ಅಲ್ಲ…