News Karnataka Kannada
Thursday, May 02 2024
ದಾವಣಗೆರೆ

ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ; ಕೆ. ಎಸ್. ಈಶ್ವರಪ್ಪ

Photo Credit :

ದಾವಣಗೆರೆ : ನರೇಗಾ ಯೋಜನೆ ಜಾರಿಗೆ ಬಂದ ನಂತರ ಇಡೀ ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಸೋಮವಾರ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ರಾಜೀವ್ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಮ ಪಂಚಾಯಿತಿ ಕಟ್ಟಡ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಸೋಲಾರ್ ಪ್ಯಾನೆಲ್ ಉದ್ಘಾಟಿಸಿ ಅವರು ಮಾತಾನಾಡಿದರು.

ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕರ್ನಾಟಕದ 6000 ಗ್ರಾಮ ಪಂಚಾಯತಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಟ್ಟಡಗಳು ಗ್ರಾಮೀಣ ಜನರ ಬೆವರಹನಿಯ ಪ್ರತಿಫಲವಾಗಿವೆ. ಉದ್ಯೋಗ ಖಾತರಿ ಯೋಜನೆಯಡಿ ಈ ಹಿಂದೆ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿತ್ತು, ನವೆಂಬರ್ ತಿಂಗಳ ಹೊತ್ತಿಗೆ ಅವುಗಳನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು 1.40 ಕೋಟಿ ಹೆಚ್ಚಿನ ಮಾನವ ದಿನಗಳ ಬೇಡಿಕೆ ನೀಡಿ, ಆ ದಿನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ಉದ್ಯೋಗ ಖಾತ್ರಿಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಲು 8 ತಿಂಗಳುಗಳ ಕಾಲ ಕಾಯಬೇಕಿತ್ತು ಆದರೆ ಪ್ರಸ್ತುತ ದಿನಗಳಲ್ಲಿ ಬಡವರಿಗೆ ಮತ್ತು ಕಾರ್ಮಿಕರಿಗೆ ಅನುಕೂಲ ಆಗಲಿ ಎನ್ನುವ ದೃಷ್ಟಿಯಿಂದ ನೇರವಾಗಿ ಕೂಲಿ ಹಣವನ್ನು 2 ರಿಂದ 3 ತಿಂಗಳಲ್ಲಿ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಪ್ರತಿಮನೆಗೂ ಕುಡಿಯುವ ನೀರನ್ನು ನಲ್ಲಿಯ ಮೂಲಕ ಸರಬರಾಜು ಮಾಡುವ ಯೋಜನೆ ಅನು ನಗೊಳಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿಯೂ ಕೂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. 2023 ರೊಳಗೆ ಕರ್ನಾಟಕದ ಎಲ್ಲಾ ಮನೆಗಳಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ದಾವಣಗೆರೆಯಲ್ಲಿ ಒಟ್ಟು 195 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ 100 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಜೊತೆಗೆ ಅಮೃತ ಯೋಜನೆಯಡಿ 750 ಗ್ರಾಮ ಪಂಚಾಯಿತಿಗಳಿಗೆ ತಲಾ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸೋಲಾರ್ ಗ್ರೀಡ್ ಮೂಲಕ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬಳಕೆ ಮಾಡಿಕೊಂಡು ಉಳಿದ ವಿದ್ಯುತ್ ಮಾರಾಟ ಮಾಡಿ ಆ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ವಾಪಸ್ಸು ನೀಡಲಾಗುವುದು, ಗ್ರಾಮದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಬೇಕು ಎಂದರು.

ಕೋವಿಡ್ ನಿಯಂತ್ರಣದಲ್ಲಿ ವಿಶ್ವದಲ್ಲೇ ಭಾರತ ಪ್ರಥಮ ಸ್ಥಾನದಲ್ಲಿದೆ. ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಅದರಲ್ಲೂ ಹೊನ್ನಾಳಿ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು