ದಾವಣಗೆರೆ : ಕೊವಿಡ್ ನಿಯಮ ಉಲ್ಲಂಘಿಸಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭಾಗಿ ಆಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಲಮುರಿ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ರೇಣುಕಾಚಾರ್ಯ ಭಾಗವಹಿಸಿದ್ದಾರೆ. ನಿನ್ನೆ (ಜನವರಿ 9) ವೀಕೆಂಡ್ ಕರ್ಫ್ಯೂ ವೇಳೆಯಲ್ಲಿಯೂ ಕ್ರಿಕೆಟ್ ಪಂದ್ಯಾವಳಿಯಲ್ಲಿ ರೇಣುಕಾಚಾರ್ಯ ಭಾಗಿ ಆಗಿದ್ದರು. ತಮ್ಮ ಸರ್ಕಾರದ ನಿಯಮಗಳನ್ನೇ ಶಾಸಕರು ಉಲ್ಲಂಘಿಸಿದ್ದಾರೆ.
ನನ್ನಿಂದ ತಪ್ಪಾಗಿದೆ. ಈ ಘಟನೆ ಬಗ್ಗೆ ನಾನು ಬಹಿರಂಗವಾಗಿ ಕ್ಷಮೆ ಯಾಚಿಸುವೆ. ಕೋವಿಡ್ ವೇಳೆ ಚೆನ್ನಾಗಿ ಕೆಲಸ ಮಾಡಿದ್ದೆ. ಆದ್ರೆ ಇಂದಿನ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಹಿನ್ನೆಲೆ ನಾನು ರಾಜ್ಯದ ಜನತೆಗೆ ವಿಲನ್ ರೀತಿ ಕಾಣುತ್ತಿರುವೆ. ಕಾಂಗ್ರೆಸ್ ಪಾದಯಾತ್ರೆ ಖಂಡಿಸಿದ್ದೆ. ಈ ಘಟನೆಯಿಂದ ಪಾದಯಾತ್ರೆ ಖಂಡಿಸುವ ನೈತಿಕತೆ ಕಳೆದು ಕೊಂಡಿದ್ದೇನೆ. ದಯಮಾಡಿ ಕ್ಷಮಿಸಿ ಎಂದು ರಾಜ್ಯದ ಜನತೆಗೆ ಶಾಸಕ ರೇಣುಕಾಚಾರ್ಯ ಬಹಿರಂಗ ಕ್ಷಮೆ ಕೇಳಿದ್ದಾರೆ.