ಜಗಳೂರು: ಮದುವೆ ಮನೆಯಲ್ಲಿ ಪಾಯಸ ಸೇವಿಸಿದ್ದ 9 ಮಕ್ಕಳು ಸೇರಿ 40ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ತಾಲ್ಲೂಕಿನ ಗೌಡಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾತ್ರಿ ಮದುವೆ ಸಮಾರಂಭದಲ್ಲಿ ಕೊನೆಯ ಪಂಕ್ತಿಯಲ್ಲಿ ಊಟ ಮಾಡುವ ವೇಳೆ ಪಾಯಸ ಸೇವಿಸಿದ 40 ಜನರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥರನ್ನೆಲ್ಲಾ ಕೂಡಲೇ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಅಸ್ವಸ್ಥರಾಗಿದ್ದ ಎಲ್ಲರಿಗೂ ತುರ್ತು ಚಿಕಿತ್ಸೆ ನೀಡಲಾಗಿದ್ದು, ಬಹುತೇಕರು ಗುಣಮುಖರಾಗಿದ್ದಾರೆ. ಅಸ್ವಸ್ಥರಲ್ಲಿ 9 ಮಕ್ಕಳು ಸೇರಿದ್ದಾರೆ. ಕೆಲವರು ಇನ್ನೂ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೂ ಯಾವುದೇ ಅಪಾಯವಿಲ್ಲ ಎಂದು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನೀರಜ್ ತಿಳಿಸಿದ್ದಾರೆ.