ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಮಹಿಳೆ ಸಹಿತ ಮೂವರು ಮೃತ

ದಾವಣಗೆರೆ :  ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಆನಗೋಡು ಸಮೀಪದ ಉಳುಪಿನಕಟ್ಟೆ ಫ್ಲೈಓವರ್‌ನಲ್ಲಿ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್‌ ಚಾಲಕ, ದಾವಣಗೆರೆ ತಾಲ್ಲೂಕಿನ ಹಾಲವರ್ತಿಯ ಎಚ್‌.ಬಿ.ಹನುಮಂತಪ್ಪ (40), ಟ್ರ್ಯಾಕ್ಟರ್‌ನಲ್ಲಿದ್ದ ಹಾಲವರ್ತಿಯ ಎಚ್‌.ಡಿ. ಕಿರಣ್‌ (34), ಲಾರಿ ಚಾಲಕನ ಪತ್ನಿ, ನಿಟುವಳ್ಳಿಯ ಅನ್ನಪೂರ್ಣಮ್ಮ (30) ಮೃತಪಟ್ಟವರು. ಹಾಲವರ್ತಿಯ ಬಸವರಾಜ ಮತ್ತು ರೇವಣಸಿದ್ಧಪ್ಪ ಗಾಯಗೊಂಡವರು.

ಟ್ರ್ಯಾಕ್ಟರ್‌ನಲ್ಲಿ ದಾವಣಗೆರೆಯಿಂದ ಪೈಪ್‌ಗಳನ್ನು ತುಂಬಿಸಿಕೊಂಡು ಹಾಲವರ್ತಿ ಕಡೆಗೆ ಹೋಗುತ್ತಿತ್ತು. ದಾವಣಗೆರೆಯಿಂದ ಬೆಂಗಳೂರು ಕಡೆಗೆ ನಿಟುವಳ್ಳಿ ಸಂತೋಷ್‌ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯು ಟ್ರ್ಯಾಕ್ಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್‌ ಪಲ್ಟಿಯಾಗಿದೆ. ಲಾರಿಯ ಎಡಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಅನ್ನಪೂರ್ಣಮ್ಮ ಅವರು ವಿಧಾನಸೌಧ ನೋಡಬೇಕು ಎಂದು ತನ್ನ ಪತಿ ಜತೆಗೆ ಲಾರಿಯಲ್ಲಿ ಹೊರಟಿದ್ದರು. ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿವೈಎಸ್‌ಪಿ ಬಸವರಾಜ್‌, ಗ್ರಾಮಾಂತರ ಪೊಲೀಸ್‌ ಠಾಣೆಯ ಪಿಎಸ್‌ಐ ನಿಂಗನಗೌಡ ನೆಗಳನೂರು, ಸಿಬ್ಬಂದಿ ಪ್ರಕಾಶ್‌, ರಂಗಸ್ವಾಮಿ, ಅಣ್ಣಯ್ಯ, ನೂರುಲ್ಲಾ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಟ್ರ್ಯಾಕ್ಟರ್‌ ಅನ್ನು ತೆಗಿಸಿ ವಾಹನ ಸಂಚಾರವನ್ನು ಸುಗಮಗೊಳಿಸಿದರು.

Swathi MG

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

25 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

38 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

58 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

1 hour ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

1 hour ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago