ದಾವಣಗೆರೆ: ದಾವಣಗೆರೆ ತಾಲೂಕಿನ ಎಲೆಬೇತೂರು ಬಳಿಯಲ್ಲಿ ಸಾಗುತ್ತಿದ್ದಂತ ಖಾಸಗೀ ಬಸ್ ಒಂದು ಎದುರಿಗೆ ಬಂದಂತ ಬೈಕ್ ಸವಾರನನ್ನು ತಪ್ಪಿಸಲು ಹೋಗಿ, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಂತ ಬಸ್ ಒಂದು ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿಯಾಗಿ, ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋ ಘಟನೆ, ದಾವಣಗೆರೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯೊಡೆದಿದೆ. ಈ ಬಳಿಕ ಉರುಳಿ ಬಿದ್ದ ಪರಿಣಾಮ, ಅದರಲ್ಲಿದ್ದಂತ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ವಿದ್ಯುತ್ ಪೂರೈಕೆ ಇಲ್ಲದ ಕಾರಣ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.