ದಾವಣಗೆರೆ : ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕುಂದುವಾಡ ಕ್ರಾಸ್ ಬಳಿ ಬೈಕ್ ನಲ್ಲಿ ಬರುವಾಗಿ ಆಯ ತಪ್ಪಿ ಬಿದ್ದು ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಮೃತರನ್ನು ಶಿವಮೊಗ್ಗ ಮೂಲದ ಜಬೀವುಲ್ಲಾ (45), ಅವರ ಪತ್ನಿ ಹಮೀದಾ (43), ಮೊಮ್ಮಗಳು ಗೌಸಿಯಾ ಬಾನು (4) ಎಂದು ಗುರುತಿಸಲಾಗಿದೆ. ಜಬೀವುಲ್ಲಾ ಮತ್ತು ಹಮೀದಾ ಅವರು, ದಾವಣಗೆರೆ ನಿಟ್ಟುವಳ್ಳಿಯಲ್ಲಿರುವ ಮಗಳ ಮನೆಗೆ ಮೊಮ್ಮಗಳನ್ನು ಕರೆದುಕೊಂಡು ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು,ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.