ದಾವಣಗೆರೆ:ದೇಶ-ವಿದೇಶಗಳಿಂದ ಜಿಲ್ಲಾಗೆ ಬಂದಿರುವ 66 ಮಂದಿ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆ ನಗರಿ ಮಂದಿಗೆ ಹೇಳಿದ್ದಾರೆ.
ನಗರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ.
7 ದಿನಗಳ ಹೋಂ ಕ್ವಾರಂಟೈನ್ ಮುಗಿದ ಬಳಿಕ ಸರ್ಕಾರದ ನಿಯಮಾನುಸಾರ ಮತ್ತೊಮ್ಮೆ ಅವರನ್ನುಟೆಸ್ಟ್ ಮಾಡುತ್ತೇವೆ ಎಂದರು.ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ. ಜನ ಭಯ ಪಡುವ ಅಗತ್ಯ ಇಲ್ಲ ಎಂದರು.