News Karnataka Kannada
Thursday, May 02 2024
ದಾವಣಗೆರೆ

ದಾವಣಗೆರೆ : ಮಾ.16 ರವರೆಗೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ ಆದೇಶ

Dc Mahanthesh Belagi
Photo Credit :

ದಾವಣಗೆರೆ : ದಾವಣಗೆರೆ ನಗರದಲ್ಲಿ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಹಾಗೂ ಶ್ರೀ ಚೌಡೇಶ್ವರಿ ಜಾತ್ರೆ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ನಿಷೇಧಾಜ್ಞೆಯನ್ನು ಮಾ.15 ರ ಬೆಳಿಗ್ಗೆ 06 ಗಂಟೆಯಿಂದ ಮಾ.16 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಮಾ.13 ರಿಂದ ಮಾ.22 ರವರೆಗೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಯ ಜಾತ್ರೆ ಮತ್ತು ವಿನೋಬನಗರದಲ್ಲಿ ಶ್ರೀ ಚೌಡೇಶ್ವರಿ ದೇವಿಯ ಜಾತ್ರೆಯು ನಡೆಯಲಿದ್ದು, ಜಾತ್ರೆಗೆ ರಾಜ್ಯದ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿದ್ದಾರೆ ಹಾಗೂ ಹಿಜಾಬ್ ವಿವಾದವು ಈಗಾಗಲೇ ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶ್ರೀ ದುಗಾರ್ಂಬಿಕಾ ದೇವಿ ದೇವಸ್ಥಾನ ಮತ್ತು ವಿನೋಬನಗರದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಸುತ್ತಮುತ್ತ 500 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು