News Karnataka Kannada
Monday, May 06 2024
ದಾವಣಗೆರೆ

ನ್ನ ಜತೆ ಚುರುಕಾಗಿ ಕೆಲಸ ಮಾಡಿ ಇಲ್ಲ ಜಾಗ ಖಾಲಿ ಮಾಡಿ ಎಂದ ಶಾಸಕ ರೇಣುಕಾಚಾರ್ಯ

Renukacharya M P 21 7 21
Photo Credit :

ದಾವಣಗೆರೆ: ನನ್ನ ಸ್ಪೀಡ್​​​ಗೆ ತಕ್ಕಂತೆ ಕೆಲಸ ಮಾಡಿ, ಇಲ್ಲಂದ್ರೆ ಕ್ಷೇತ್ರ ಖಾಲಿ ಮಾಡಿ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಧಿಕಾರಿಗಳಿಗೆ ಖಡಕ್​​​ ಎಚ್ಚರಿಕೆ ನೀಡಿದ್ದಾರೆ. ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಹೀಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವಾಜ್​​ ಹಾಕಿದ್ದಾರೆ.
ಹೊನ್ನಾಳಿ ಕ್ಷೇತ್ರದ ಅಧಿಕಾರಿಗಳು ನನ್ನ ವೇಗಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇಲ್ಲದೇ ಹೋದಲ್ಲಿ ಕೂಡಲೇ ಜಾಗ ಖಾಲಿ ಮಾಡಬೇಕು. ಕ್ಷೇತ್ರದಲ್ಲಿ ನೆರೆ ಹಾವಳಿಯಿಂದ ಜನ ತತ್ತರಿಸಿದಾಗ ಕಂದಾಯ ಮತ್ತು ಕೃಷಿ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಿ ಎಂದು ಆದೇಶಿಸಿದ್ದೆ. ಎಲ್ಲಿ ಮಾಡಿದ್ದೀರಿ ತೋರಿಸಿ ಎಂದು ಸಚಿವ ಬೈರತಿ ಬಸವರಾಜ್​​ ಮುಂದೆಯೇ ಅಧಿಕಾರಿಗಳಿಗೆ ಚಳಿ ಬಿಡಿಸಿದರು.ನಾನು ದೆಹಲಿಯಲ್ಲೇ ಇರಲಿ, ಬೆಂಗಳೂರಿನಲ್ಲೇ ಇರಲಿ. ನಿಮ್ಮ ಕೆಲಸ ನೀವು ಮಾಡಬೇಕು. ನನಗೆ ಅವಳಿ ತಾಲೂಕಿನ ಬಗ್ಗೆ ಎಲ್ಲಾ ಮಾಹಿತಿ ಬರುತ್ತಿದೆ. ನಾನು ಹೇಳಿದ 15 ದಿನವಾದರೂ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿಲ್ಲ. ನನ್ನ ಸ್ಪೀಡ್​​ಗೆ ತಕ್ಕಂತೆ ಕೆಲಸ ಮಾಡಬಹುದು, ಇಲ್ಲದೆ ಹೋದಲ್ಲಿ ಜಾಗ ಖಾಲಿ ಮಾಡಬಹುದು ಎಂದು ಅಧಿಕಾರಿಗಳಿಗೆ ವಾರ್ನ್​​ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು