ದಾವಣಗೆರೆ : ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡುತ್ತೇವೆ. ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಮುಂದಿನ ಚುನಾವಣೆ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮಾಡುತ್ತೇವೆ. ಮುಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಆಗಲಿದ್ದಾರೆ.
ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನ ಯಾರಿಗೆ ಕೊಟ್ಟರೇನು ? ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಂದರು. ಇನ್ನು ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆದಿದ್ದು, ಹಾನಗಲ್ ನಲ್ಲಿ ಶೇ. 83 ರಷ್ಟು, ಸಿಂದಗಿಯಲ್ಲಿ ಶೇ. 69 ರಷ್ಟು ಮತದಾನವಾಗಿದೆ. ಸಿಂದಗಿಯಲ್ಲಿ 20 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.