News Karnataka Kannada
Thursday, May 09 2024
ದಾವಣಗೆರೆ

ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದ ಅರುಣ್ ಸಿಂಗ್

Arun Singh
Photo Credit :

ದಾವಣಗೆರೆ:ಕೋವಿಡ್ 19 ರ ಸಂದರ್ಭದಲ್ಲಿ ಏನಾದರೂ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದರೆ ದೇಶದ ಪರಿಸ್ಥಿತಿ ಏನಾಗಿರುತ್ತಿತ್ತು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಲೇವಡಿ ಮಾಡಿದರು

ಭಾನುವಾರ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು ಕೋವಿಡ್ ಲಸಿಕಾಕರಣ ಪ್ರಾರಂಭಿಸಿದ ಪ್ರಾರಂಭದಲ್ಲಿ ಸೋನಿಯಾಗಾಂಧಿ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ರೇವಡಿ ಮಾಡಿದವರು ಈಗ ಅವರೆಲ್ಲಾ ಲಸಿಕೆ ‌ಹಾಕಿಕೊಂಡಿದ್ದಾರೆ ಕಾಂಗ್ರೆಸ್ ನವರಿಗೆ ಜನಪರವಾದ ಯಾವುದೇ ವಿಚಾರಗಳ ಬಗ್ಗೆ ತಿಳಿದಿಲ್ಲ ಎಂದು ಛೇಡಿಸಿದರು ದೇಶದ ಅಭಿವೃದ್ಧಿಗೆ ಪ್ರತಿಯೊಂದು ವಿಷಯದಲ್ಲಿ ನಕಾರಾತ್ಮಕ ರಾಜಕಾರಣ ಮಾಡುತ್ತಿದೆ ಎಂದು ಅರುಣ್ ಸಿಂಗ್ ವ್ಯಂಗ ಮಾಡಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ಕಾ ವಿಶ್ವಾಸ ಮೂಲಮಂತ್ರ ಮುನ್ನಡೆಸುವ ಬಿಜೆಪಿ ಕೇಂದ್ರ ಸಂಪುಟದಲ್ಲಿ 20 ಎಸ್ ಸಿ.ಎಸ್ ಟಿ 17 ಹಿಂದುಳಿದ ವರ್ಗದವರನ್ನು ಸಚಿವರನ್ನಾಗಿಸಿದೆ ಸಂಸತ್ತಿನಲ್ಲಿ ನೂತನ ಸಚಿವರನ್ನು ಪರಿಚಯ ಮಾಡುವುದಕ್ಕೂ ಕಾಂಗ್ರೆಸ್ ಅಡ್ಡಿ ಪಡಿಸಿತ್ತು ಎಂದು ದೂರಿದರು ಕಾಂಗ್ರೆಸ್ ಈಗಾಗಲೇ ವಿನಾಶದಂಚಿನಲ್ಲಿದೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ಸಚಿ‌ನ್ ಪೈಲೆಟ್ ನಡುವೆ ಜಗಳ ನಡೆಯುತ್ತಿದೆ ಛತ್ತೀಸ್ ಘಡ್ ನಲ್ಲಿ ಇದೇ ಪರಿಸ್ಥಿತಿ ಕಾಂಗ್ರೆಸ್ ನಕಾರಾತ್ಮಕ ರಾಜಕಾರಣ ಮಾಡುತ್ತಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು