News Karnataka Kannada
Saturday, May 11 2024
ದಾವಣಗೆರೆ

ಲಾಕ್‌ಡೌನ್‌ ಮಾಡುವುದಿಲ್ಲ: ಸಚಿವ ಬೈರತಿ ಬಸವರಾಜ

Bairathi
Photo Credit :

ದಾವಣಗೆರೆ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್‌ ಮಾಡುವುದಿಲ್ಲ. ಕೋವಿಡ್‌ಗೆ ಲಾಕ್‌ಡೌನ್‌ ಒಂದೇ ಪರಿಹಾರವಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೊರೊನಾದಿಂದಾಗಿ ಜನರ ಜೀವನವೇ ದುಸ್ತರವಾಗಿದೆ. ಎರಡು ವರ್ಷಗಳಿಂದ ಸಂಕಷ್ಟಗಳಿಗೆ ಸಿಲುಕಿದ್ದಾರೆ. ಇಂಥ ಸಂದರ್ಭದಲ್ಲಿ ಮತ್ತೆ ಲಾಕ್‌ಡೌನ್ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿಗಳ ಮುಂದೆ ಲಾಕ್‌ಡೌನ್‌ ಪ್ರಸ್ತಾವ ಇಲ್ಲ’ ಎಂದು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ ಸೋಂಕು ಉಲ್ಬಣ ಆಗುತ್ತಿದೆ. ಜನರು ಮೈ ಮರೆತು ನಡೆದಾಡುತ್ತಿದ್ದಾರೆ. ಸರ್ಕಾರ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಜನರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.

‘ಜಿಲ್ಲಾ ಆಸ್ಪತ್ರೆಗಳಲ್ಲಿ ಬೆಡ್‌, ವೆಂಟಿಲೇಟರ್‌ ಸಹಿತ ಎಲ್ಲವನ್ನು ಸಿದ್ಧ ಮಾಡಿಕೊಳ್ಳಲು ಸೂಚಿಸಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜ್ಞಾನ ಇಲ್ಲದ ಡಿಕೆಶಿ, ಸಿದ್ದರಾಮಯ್ಯ: ಮೇಕೆದಾಟು ಸೂಕ್ಷ್ಮ ವಿಷಯ. ಇದನ್ನು ಯಾವ ರೀತಿ ನಿಭಾಯಿಸಬೇಕು ಎಂಬುದನ್ನು ಅರಿತುಕೊಳ್ಳಬೇಕು. ಅದನ್ನು ಬಿಟ್ಟು ಪಾದಯಾತ್ರೆ ಹೊರಡುವುದು ಪರಿಹಾರವಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ಜ್ಞಾನವೇ ಇಲ್ಲ ಎಂದು ಬೈರತಿ ಟೀಕಿಸಿದರು.

ಮೇಕೆದಾಟು ಯೋಜನೆ ಅರ್ಧಕ್ಕೆ ನಿಂತರೆ ಕಾಂಗ್ರೆಸ್‌ ಅದಕ್ಕೆ ನೇರಹೊಣೆಯಾಗುತ್ತದೆ. ವಿರೋಧ ಪಕ್ಷವು ಜವಾಬ್ದಾರಿಯಿಂದ ನಡೆದುಕೊಳ್ಳಲಿ ಎಂದು ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು