News Karnataka Kannada
Friday, May 17 2024
ದಾವಣಗೆರೆ

ಸಿಎಂ ಬದಲಾವಣೆ ವಿಚಾರ ಬಿಜೆಪಿಯ ಸುಗಮ ಆಡಳಿತವನ್ನು ಕುಂಠಿತ ಮಾಡಲು ಮಾಡುತ್ತಿರುವ ಕುತಂತ್ರ : ಬಿ ವೈ ವಿಜಯೇಂದ್ರ

Photo Credit :

ದಾವಣಗೆರೆ: ಸಿಎಂ ಬದಲಾವಣೆ ಕೇವಲ ಕಪೋಲಕಲ್ಪಿತ, ರಾಜ್ಯದ ಜನತೆಯ ಹಾದಿ ತಪ್ಪಿಸಲು ಕಾಂಗ್ರೆಸ್ ಮಾಡುತ್ತಿರುವ ಕುತಂತ್ರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಅವರು, ಬಿಟ್ ಕಾಯಿನ್ ಕೇಸ್ ಬಗ್ಗೆ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ, ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ವಿಚಾರ ಬಿಜೆಪಿಯ ಸುಗಮ ಆಡಳಿತವನ್ನು ಕುಂಠಿತ ಮಾಡಲು ಮಾಡುತ್ತಿರುವ ಕುತಂತ್ರವಿದು ಎಂದು ಹೇಳಿದ್ದಾರೆ.

ಬಿಟ್ ಕಾಯಿನ್ ದಂಧೆ ಬಗ್ಗೆ ಸೂಕ್ತ ತನಿಖೆಯಾಗುತ್ತಿದೆ, ಅದೇನು ಬೊಮ್ಮಾಯಿಯವರು ಸಿಎಂ ಆದ ಬಳಿಕ ನಡೆದ ಘಟನೆಯಲ್ಲ, 3-4 ವರ್ಷಗಳ ಹಿಂದಿನ ಘಟನೆ, ತನಿಖೆ ಬಳಿಕ ಯಾರು ತಪ್ಪು ಮಾಡಿದ್ದಾರೆಂದು ತಿಳಿಯುತ್ತದೆ. ಇನ್ನು ಕೆಲವು ದಿನಗಳಲ್ಲಿ ಪರಿಷತ್ ಚುನಾವಣೆ ಇದೆ, ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ ನವರೇ ಭಾಗಿಯಾಗಿದ್ದಾರೆ, ಈಗ ಅವರೇ ಆರೋಪ ಮಾಡುತ್ತಿರುವುದು ವಿಚಿತ್ರವೆನಿಸುತ್ತದೆ ಎಂದರು.

ಇನ್ನು ಒಂದೂವರೆ ವರ್ಷ ಬಸವರಾಜ ಬೊಮ್ಮಾಯಿಯವರೇ ಸಿಎಂ ಆಗಿರುತ್ತಾರೆ. ಸಿಎಂ ಎಲ್ಲಾ ವರ್ಗದ ಜನರಿಗೆ, ಎಲ್ಲಾ ಸಮಾಜದ ಜನರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿ ವೈ ವಿಜಯೇಂದ್ರ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು