ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೆಗಾ ಶೋ ಆಗುವ ಸಾಧ್ಯತೆ ಇದೆ.
ಈ ಆಚರಣೆಗಾಗಿ ಸಮಿತಿ ರಚಿಸಲಾಗಿದೆ. ಸಮಿತಿಯು 129 ಸದಸ್ಯರನ್ನು ಹೊಂದಿದೆ. ಈ ಸಮಿತಿಗೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಗೌರವಾಧ್ಯಕ್ಷರಾಗಿರುತ್ತಾರೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಜಮೀನಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದ ತಂಡ ಈಗಾಗಲೇ ಕೆಲಸ ಆರಂಭಿಸಿದೆ.
ತುಮಕೂರಿನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸಮಿತಿ ಅಧ್ಯಕ್ಷರು. ಹೆಬ್ಬಾಳ ಶಾಸಕ ಭೈರತಿ ಸುರೇಶ್ ಖಜಾಂಚಿಯಾಗಿದ್ದಾರೆ.
ಮೂಲಗಳ ಪ್ರಕಾರ ಎಐಸಿಸಿ ನಾಯಕರಾದ ರಾಗಾ, ಕೆಸಿ ವೇಣುಗೋಪಾಲ್, ಡಿ ಕೆ ಶಿವಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.