ದಾವಣಗೆರೆ/ಹುಬ್ಬಳ್ಳಿ: 13 ವರ್ಷದ ಬಾಲಕನಿಗೆ ಆತನ ತಂದೆ ಚೆನ್ನಾಗಿ ಓದು ಅಂದಿದ್ದಕ್ಕೆ ಮನೆಬಿಟ್ಟು ಬಾಲಕ ಓಡಿಹೋದ ಘಟನೆ ನಡೆದಿದೆ.
ಈತ ದಾವಣಗೆರೆ ನಗರದ ಎಸ್ಎಸ್ ಲೇಔಟ್ ನಿವಾಸಿ ಹನುಮಂತ, ಗಂಗಮ್ಮ ಅವರರ ಪುತ್ರ ಸಾತ್ವಿಕ್ ಮನೆ ಬಿಟ್ಟ ಹೋದವನು. SSNPS ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸಾತ್ವಿಕ್ಗೆ ತಂದೆ ಚೆನ್ನಾಗಿ ಓದಿಕೋ ಎಂದಿದ್ದಾರಂತೆ. ಇಷ್ಟಕ್ಕೆ ಸಾತ್ವಿಕ್ ಮನೆಬಿಟ್ಟು ಹೋಗಿದ್ದಾನೆ. ಫೆಬ್ರವರಿ 6ಕ್ಕೆ ಮನೆ ಬಿಟ್ಟು ಓಡಿ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈತ ದಾವಣಗೆರೆ ರೇಲ್ವೆ ನಿಲ್ದಾಣದಲ್ಲಿ ಟಿಕೆಟ್ ಪಡೆದು ಹುಬ್ಬಳ್ಳಿ ಟ್ರೈನ್ ಹತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಂದೆ ಹುಬ್ಬಳ್ಳಿಗೆ ತೆರಳಿ ಗಲ್ಲಿ ಗಲ್ಲಿಗಳಲ್ಲಿ ಹುಡುಕಾಡುತ್ತಿದ್ದಾರೆ.
ಸಾತ್ವಿಕ್ ಮನೆ ಬಿಟ್ಟು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.